ಸುಳ್ಯ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ, ಸಸ್ಯರಾಶಿಗಳ ಮಹತ್ವ ಜಾಗೃತಿಗಾಗಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಯಿತು. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ಧಾನ್ಯ ಮತ್ತು ನೀರಿಡುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಲ್ಕುಡ ದೈವಸ್ಥಾನದ ಆವರಣದಲ್ಲಿ ಗುಬ್ಬಚ್ಚಿಗೂಡು ಕಾರ್ಯಾಗಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ರಂಜಿತ್ ಬೇಕರಿಯ ರಂಜಿತ್ ರವರಿಗೆ ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ನೀಡಿದರು.
ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಕರಪತ್ರದ ಮೂಲಕ ಅಭಿಯಾನದ ಉದ್ದೇಶ ವಿವರಿಸಿದರು. ಸ್ಥಳೀಯರಾದ ದಾಸಪ್ಪ ಬಂಗ್ಲೆಗುಡ್ಡೆ ಹಾಗೂ ಸುನೀತಾ ವಿಶ್ವನಾಥ ಪಡ್ಡಬೈಲು ಉಪಸ್ಥಿತರಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…