Advertisement
MIRROR FOCUS

ಗುಬ್ಬಚ್ಚಿಗೊಂದು ಗೂಡು : ಅಭಿಯಾನದಲ್ಲಿ ತೊಡಗಿಸಿಕೊಂಡ ದಂಪತಿಗಳು

Share

ಅಭಿಯಾನ, ಆಂದೋಲನಗಳು ನಡೆಸುವವರು ಹಲವಾರು ಮಂದಿ. ಕೆಲವರು ತನಗೋಸ್ಕರ ಅಭಿಯಾನ ನಡೆಸಿದರೆ ಇನ್ನೂ ಕೆಲವರು ಸಮಾಜಕ್ಕಾಗಿ, ಪ್ರಚಾರಕ್ಕಾಗಿ. ಮತ್ತೂ ಕೆಲವರು  ಇನ್ನೊಬ್ಬರ ಕಾಲೆಳೆಯಲು. ಆದರೆ ಇಲ್ಲೊಂದು ವಿನೂತನ ಅಭಿಯಾನ ನಡೆಸಲಾಗುತ್ತಿದೆ. ಇದು ಗುಬ್ಬಚ್ಚಿಗಾಗಿ , ಗುಬ್ಬಚ್ಚಿ ಮನೆಗಾಗಿ, ಹಕ್ಕಿಗಳಿಗಾಗಿ….!.  ಅವುಗಳಿಗೊಂದು ಮನೆ ಮಾಡಿಕೊಡಿ ಎಂಬ ಅಭಿಯಾನ. ಈಚೆಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ಈ ಅಭಿಯಾನ ನಡೆಯಿತು. ಅದರೊಳಗೆ ಹೋದಾಗ ಕಾಳಜಿಯ ಅರಿವಾಯಿತು.

Advertisement
Advertisement

 


 

ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಪರಿಸರದಲ್ಲಿ ಇರುವ ಎಲ್ಲವೂ ಇರಬೇಕು. ಎರೆಹುಳದಿಂದ ತೊಡಗಿ ಮರದವರೆಗೆ ಎಲ್ಲಾ ಜೀವಿಗಳೂ ಪರಿಸರದ ಅವಿಭಾಜ್ಯ ಅಂಗ. ಈಚೆಗೆ ಹಕ್ಕಿಗಳು ಅದರಲ್ಲೂ ಗುಬ್ಬಚ್ಚಿಗಳು ಮರೆಯಾಗುತ್ತಿವೆ. ಇವುಗಳು ಉಳಿಯಬೇಕು ಜೊತೆಗೆ ಇತರ ಹಕ್ಕಿಗಳೂ ಇರಬೇಕು ಎಂದು ಅಭಿಯಾನ ನಡೆಸುತ್ತಿರುವವರು  ನಿತ್ಯಾನಂದ ಶೆಟ್ಟಿ ಬದ್ಯಾರು ಹಾಗೂ ರಮ್ಯ ನಿತ್ಯಾನಂದ ಶೆಟ್ಟಿ.

 

 

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಅವರ  ಮನೆಯಲ್ಲಿ  ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಿದರು. ಇವರ ಜೊತೆಗೆ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಇದ್ದರು. ಕಳೆದ ಅನೇಕ ವರ್ಷಗಳಿಂದ ಈ ಅಭಿಯಾನ ಮಾಡುತ್ತಿರುವ ನಿತ್ಯಾನಂದ ಶೆಟ್ಟಿ ಬಂಟ್ವಾಳ ತಾಲೂಕಿನ ವಾಮನಪೊದವಿನ ಎಲಿಯಗೂಡು ಗ್ರಾಮದ ಬದ್ಯಾರಿನವರು. ತಮ್ಮ ಊರಿನಲ್ಲಿ  ಅನೇಕ ವರ್ಷಗಳಿಂದ ಹಕ್ಕಿಗಳ ಗೂಡು ರಕ್ಷಣೆಗಾಗಿ ಮನೆಯಲ್ಲಿ ಕೃತಕ ಗೂಡು ಇರಿಸಿ ವಾಸಿಸಲು  ಜಾಗ ಮಾಡಿದರೆ, ಬೇಸಗೆಯ ಕಾಲ ಕುಡಿಯಲು ನೀರು ಇರಿಸಿ ಹಕ್ಕಿಗಳು ಬರುವಂತೆ ಮಾಡುತ್ತವೆ. ಪಕ್ಷಿಗಳಿಗೆ ಈಗ ಕಾಡಲ್ಲೂ ಜಾಗವಿಲ್ಲ, ಊರಲ್ಲೂ ಇಲ್ಲದ ಸ್ಥಿತಿ ಇದೆ. ಹೀಗಾಗಿ ನಾಶದ ಅಂಚಿನಲ್ಲಿ ಇವೆ. ಇದಕ್ಕಾಗಿ ಕೃತಕವಾಗಿ ಗೂಡು ಇರಿಸಿ ಅವುಗಳಿಗೆ ಜಾಗ ಮಾಡಿಕೊಡುವುದು ಉದ್ದೇಶ ಎಂದು ಹೇಳುತ್ತಾರೆ ನಿತ್ಯಾನಂದ ಶೆಟ್ಟಿ.

 

 

 

ಮನೆ ಪಕ್ಕದ ಸುಮಾರು 2 ಎಕ್ರೆ ಪ್ರದೇಶದಲ್ಲಿ ಮಡಕೆಯ ಗೂಡು ಇರಿಸಿದ್ದಾರೆ. ಇಂದು ಹತ್ತಾರು ಹಕ್ಕಿಗಳು ಇಲ್ಲಿ ಬಂದು ವಾಸ ಮಾಡಿ ಮೊಟ್ಟೆ ಇಟ್ಟು ಮರಿ ಮಾಡಿ ಹೋಗುತ್ತವೆ. ಯಾವುದೇ ಬಂಧ ಇಲ್ಲ ಇಲ್ಲಿನ  ಹಕ್ಕಿಗಳಿಗೆ. ಬೆಟ್ಟದ, ಬಂಡೆಯ ಮೇಲೆ ರಾಡ್ ಮೂಲಕ ಮಡಕೆಯಲ್ಲಿ ನೀರು ಇರಿಸಿ ಬಿಡಲಾಗುತ್ತದೆ. ನೀರು ಕಡಿಮೆಯಾದಂತೆಯೇ ನೀರು ಎರೆಯಲಾಗುತ್ತದೆ. ಹಕ್ಕಿಗಳಿಗೆ ಬಾಯಾರಿಕೆಯಾದಾಗ  ಬಂದು ನೀರು ಕುಡಿದು ಹೋಗುತ್ತವೆ.

 

 

 

 

 

ಎಳೆವೆಯಲ್ಲಿ ಅವರ ತಾಯಿ ಹಕ್ಕಿಗಳಿಗೆ ನೀರು ಇಡು ಎನ್ನುತ್ತಿದ್ದ ಮಾತೇ ಸ್ಫೂರ್ತಿ ನೀಡಿತು. ನಂತರ ಆಸಕ್ತಿಯಾಯಿತು. ಈಗ ಅಭಿಯಾನದ ಮಾದರಿಯಲ್ಲಿ ಶಾಲೆಗಳಲ್ಲಿ , ಗ್ರಾಮೀಣ ಭಾಗಗಳಲ್ಲಿ ಈ ಅಭಿಯಾನ ನಡೆಸುತ್ತಿದ್ದಾರೆ. ನೂರಾರು ಶಾಲೆಗಳಲ್ಲಿ  ನಿತ್ಯಾನಂದ ಶೆಟ್ಟಿ ಹಾಗೂ ರಮ್ಯ ಅವರು ಮಕ್ಕಳಿಗೆ ಮಾಹಿತಿ ನಿಡಿದ್ದಾರೆ. ಈಗಲೂ ಮಾಡುತ್ತಿದ್ದಾರೆ.

 

ಹಕ್ಕಿಗಳು ಪರಿಸರದ ಭಾಗ. ಅವುಗಳು ಸಂರಕ್ಷಣೆ ನಮ್ಮ ಹೊಣೆ ಎಂದು ಈ ಅಭಿಯಾನ ಮಾಡುತ್ತಿದ್ದೇನೆ. ಇದೊಂದು ಹವ್ಯಾಸವೂ ಹೌದು. ಎಲ್ಲೇ ಇದ್ದರೂ, ಯಾರೇ ಹೇಳಿದರೂ ನಾವು ಹೋಗಿ ಮಾಹಿತಿ ನೀಡುತ್ತೇವೆ ಎನ್ನುತ್ತಾರೆ ನಿತ್ಯಾನಂದ ಶೆಟ್ಟಿ ಬದ್ಯಾರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago