Advertisement
MIRROR FOCUS

ಗುಬ್ಬಚ್ಚಿಗೊಂದು ಗೂಡು : ಅಭಿಯಾನದಲ್ಲಿ ತೊಡಗಿಸಿಕೊಂಡ ದಂಪತಿಗಳು

Share

ಅಭಿಯಾನ, ಆಂದೋಲನಗಳು ನಡೆಸುವವರು ಹಲವಾರು ಮಂದಿ. ಕೆಲವರು ತನಗೋಸ್ಕರ ಅಭಿಯಾನ ನಡೆಸಿದರೆ ಇನ್ನೂ ಕೆಲವರು ಸಮಾಜಕ್ಕಾಗಿ, ಪ್ರಚಾರಕ್ಕಾಗಿ. ಮತ್ತೂ ಕೆಲವರು  ಇನ್ನೊಬ್ಬರ ಕಾಲೆಳೆಯಲು. ಆದರೆ ಇಲ್ಲೊಂದು ವಿನೂತನ ಅಭಿಯಾನ ನಡೆಸಲಾಗುತ್ತಿದೆ. ಇದು ಗುಬ್ಬಚ್ಚಿಗಾಗಿ , ಗುಬ್ಬಚ್ಚಿ ಮನೆಗಾಗಿ, ಹಕ್ಕಿಗಳಿಗಾಗಿ….!.  ಅವುಗಳಿಗೊಂದು ಮನೆ ಮಾಡಿಕೊಡಿ ಎಂಬ ಅಭಿಯಾನ. ಈಚೆಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ಈ ಅಭಿಯಾನ ನಡೆಯಿತು. ಅದರೊಳಗೆ ಹೋದಾಗ ಕಾಳಜಿಯ ಅರಿವಾಯಿತು.

 


 

ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಪರಿಸರದಲ್ಲಿ ಇರುವ ಎಲ್ಲವೂ ಇರಬೇಕು. ಎರೆಹುಳದಿಂದ ತೊಡಗಿ ಮರದವರೆಗೆ ಎಲ್ಲಾ ಜೀವಿಗಳೂ ಪರಿಸರದ ಅವಿಭಾಜ್ಯ ಅಂಗ. ಈಚೆಗೆ ಹಕ್ಕಿಗಳು ಅದರಲ್ಲೂ ಗುಬ್ಬಚ್ಚಿಗಳು ಮರೆಯಾಗುತ್ತಿವೆ. ಇವುಗಳು ಉಳಿಯಬೇಕು ಜೊತೆಗೆ ಇತರ ಹಕ್ಕಿಗಳೂ ಇರಬೇಕು ಎಂದು ಅಭಿಯಾನ ನಡೆಸುತ್ತಿರುವವರು  ನಿತ್ಯಾನಂದ ಶೆಟ್ಟಿ ಬದ್ಯಾರು ಹಾಗೂ ರಮ್ಯ ನಿತ್ಯಾನಂದ ಶೆಟ್ಟಿ.

 

 

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಅವರ  ಮನೆಯಲ್ಲಿ  ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಿದರು. ಇವರ ಜೊತೆಗೆ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಇದ್ದರು. ಕಳೆದ ಅನೇಕ ವರ್ಷಗಳಿಂದ ಈ ಅಭಿಯಾನ ಮಾಡುತ್ತಿರುವ ನಿತ್ಯಾನಂದ ಶೆಟ್ಟಿ ಬಂಟ್ವಾಳ ತಾಲೂಕಿನ ವಾಮನಪೊದವಿನ ಎಲಿಯಗೂಡು ಗ್ರಾಮದ ಬದ್ಯಾರಿನವರು. ತಮ್ಮ ಊರಿನಲ್ಲಿ  ಅನೇಕ ವರ್ಷಗಳಿಂದ ಹಕ್ಕಿಗಳ ಗೂಡು ರಕ್ಷಣೆಗಾಗಿ ಮನೆಯಲ್ಲಿ ಕೃತಕ ಗೂಡು ಇರಿಸಿ ವಾಸಿಸಲು  ಜಾಗ ಮಾಡಿದರೆ, ಬೇಸಗೆಯ ಕಾಲ ಕುಡಿಯಲು ನೀರು ಇರಿಸಿ ಹಕ್ಕಿಗಳು ಬರುವಂತೆ ಮಾಡುತ್ತವೆ. ಪಕ್ಷಿಗಳಿಗೆ ಈಗ ಕಾಡಲ್ಲೂ ಜಾಗವಿಲ್ಲ, ಊರಲ್ಲೂ ಇಲ್ಲದ ಸ್ಥಿತಿ ಇದೆ. ಹೀಗಾಗಿ ನಾಶದ ಅಂಚಿನಲ್ಲಿ ಇವೆ. ಇದಕ್ಕಾಗಿ ಕೃತಕವಾಗಿ ಗೂಡು ಇರಿಸಿ ಅವುಗಳಿಗೆ ಜಾಗ ಮಾಡಿಕೊಡುವುದು ಉದ್ದೇಶ ಎಂದು ಹೇಳುತ್ತಾರೆ ನಿತ್ಯಾನಂದ ಶೆಟ್ಟಿ.

 

 

 

ಮನೆ ಪಕ್ಕದ ಸುಮಾರು 2 ಎಕ್ರೆ ಪ್ರದೇಶದಲ್ಲಿ ಮಡಕೆಯ ಗೂಡು ಇರಿಸಿದ್ದಾರೆ. ಇಂದು ಹತ್ತಾರು ಹಕ್ಕಿಗಳು ಇಲ್ಲಿ ಬಂದು ವಾಸ ಮಾಡಿ ಮೊಟ್ಟೆ ಇಟ್ಟು ಮರಿ ಮಾಡಿ ಹೋಗುತ್ತವೆ. ಯಾವುದೇ ಬಂಧ ಇಲ್ಲ ಇಲ್ಲಿನ  ಹಕ್ಕಿಗಳಿಗೆ. ಬೆಟ್ಟದ, ಬಂಡೆಯ ಮೇಲೆ ರಾಡ್ ಮೂಲಕ ಮಡಕೆಯಲ್ಲಿ ನೀರು ಇರಿಸಿ ಬಿಡಲಾಗುತ್ತದೆ. ನೀರು ಕಡಿಮೆಯಾದಂತೆಯೇ ನೀರು ಎರೆಯಲಾಗುತ್ತದೆ. ಹಕ್ಕಿಗಳಿಗೆ ಬಾಯಾರಿಕೆಯಾದಾಗ  ಬಂದು ನೀರು ಕುಡಿದು ಹೋಗುತ್ತವೆ.

 

 

 

 

 

ಎಳೆವೆಯಲ್ಲಿ ಅವರ ತಾಯಿ ಹಕ್ಕಿಗಳಿಗೆ ನೀರು ಇಡು ಎನ್ನುತ್ತಿದ್ದ ಮಾತೇ ಸ್ಫೂರ್ತಿ ನೀಡಿತು. ನಂತರ ಆಸಕ್ತಿಯಾಯಿತು. ಈಗ ಅಭಿಯಾನದ ಮಾದರಿಯಲ್ಲಿ ಶಾಲೆಗಳಲ್ಲಿ , ಗ್ರಾಮೀಣ ಭಾಗಗಳಲ್ಲಿ ಈ ಅಭಿಯಾನ ನಡೆಸುತ್ತಿದ್ದಾರೆ. ನೂರಾರು ಶಾಲೆಗಳಲ್ಲಿ  ನಿತ್ಯಾನಂದ ಶೆಟ್ಟಿ ಹಾಗೂ ರಮ್ಯ ಅವರು ಮಕ್ಕಳಿಗೆ ಮಾಹಿತಿ ನಿಡಿದ್ದಾರೆ. ಈಗಲೂ ಮಾಡುತ್ತಿದ್ದಾರೆ.

 

ಹಕ್ಕಿಗಳು ಪರಿಸರದ ಭಾಗ. ಅವುಗಳು ಸಂರಕ್ಷಣೆ ನಮ್ಮ ಹೊಣೆ ಎಂದು ಈ ಅಭಿಯಾನ ಮಾಡುತ್ತಿದ್ದೇನೆ. ಇದೊಂದು ಹವ್ಯಾಸವೂ ಹೌದು. ಎಲ್ಲೇ ಇದ್ದರೂ, ಯಾರೇ ಹೇಳಿದರೂ ನಾವು ಹೋಗಿ ಮಾಹಿತಿ ನೀಡುತ್ತೇವೆ ಎನ್ನುತ್ತಾರೆ ನಿತ್ಯಾನಂದ ಶೆಟ್ಟಿ ಬದ್ಯಾರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

11 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

11 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

22 hours ago