ಸುದ್ದಿಗಳು

ಗುರುಂಪುನಿಂದ-ನಾಗಪಟ್ಟಣದವರೆಗೆ ಆರಂಭಗೊಳ್ಳದ ರಸ್ತೆ ದುರಸ್ಥಿ: ನಗರ ಪಂಚಾಯತ್ ಎದುರು ನಾಗರಿಕರ ಪ್ರತಿಭಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗುರುಂಪುನಿಂದ-ನಾಗಪಟ್ಟಣದವರೆಗೆ 15 ದಿನಗಳೊಳಗೆ ರಸ್ತೆ ದುರಸ್ಥಿ ಆರಂಭಗೊಳಿಸುತ್ತೇವೆ ಎಂದು ಭರವಸೆ ನೀಡಿದ ನ.ಪಂ
ಅಧಿಕಾರಿಗಳು ಇನ್ನೂ ಕಾಮಗಾರಿ ಆರಂಭಿಸದಿರುವ ಹಿನ್ನಲೆಯಲ್ಲಿ ನ.ಪಂ. ವಿರುದ್ಧ ನಗರ ಪಂಚಾಯತ್ ಮುಂಭಾಗ ನಾಗರಿಕರು ಶನಿವಾರ ಪ್ರತಿಭಟನೆ ನಡೆಸಿದರು.

Advertisement
Advertisement

ಪ್ರತಿಭಟನೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ಕಳೆದ ಬಾರಿ ಸೇತುವೆ ಬಳಿ ಪ್ರತಿಭಟನೆ ನಡೆಸಿದಾಗ 15 ದಿನದಲ್ಲಿ ಗುರುಂಪಿನಿಂದ ನಾಗಪಟ್ಟಣದವರೆಗಿನ ರಸ್ತೆ ಹೊಂಡ ಮುಚ್ಚುವ ಕಾಮಗಾರಿ ನಡೆಸುವ ಭರವಸೆ ನೀಡಿದ್ದರೂ ಆರಂಭಿಸಿಲ್ಲ. ನಾವು ಗ್ರಾಮಸ್ಥರ ಜತೆ ಸೇರಿ ರಸ್ತೆ ಅಭಿವೃದ್ಧಿ ಗೆ ಒತ್ತಾಯಿಸಿದರೆ ಅದಕ್ಕೆ ಶಾಸಕರು ಕಾಂಗ್ರೆಸ್ ಪ್ರತಿಭಟನೆ ಎಂದು ಹೇಳಿಕೆ ನೀಡುತ್ತಾರೆ. ಆ ರೀತಿಯ ಹೇಳಿಕೆ ನೀಡುವುದಕ್ಕಿಂತ ಶಾಸಕರು ಕೆಲಸ ಮಾಡಿ ತೋರಿಸಲಿ ಎಂದು ಆಗ್ರಹಿಸಿದರು.

ನ.ಪಂ‌.ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ಕೂಡಲೇ ರಸ್ತೆ ದುರಸ್ಥಿ ಆರಂಭಿಸುವಂತೆ ಒತ್ತಾಯಿಸಿದರು. ಪ್ರಮುಖರಾದ ತೇಜಕುಮಾರ್ ಬಡ್ಡಡ್ಕ, ಸತ್ಯಕುಮಾರ್ ಆಡಿಂಜ, ಡೇವಿಡ್‌ ಧೀರಾ ಕ್ರಾಸ್ತ ಮಾತನಾಡಿದರು.  ಮುಖಂಡರಾದ ಬೆಟ್ಟ ರಾಜಾರಾಂ ಭಟ್, ಬೀರಾ ಮೊಯ್ದೀನ್, ಶರೀಫ್ ಕಂಠಿ, ಧರ್ಮಪಾಲ ಕೊಯಿಂಗಾಜೆ, ಶ್ರೀಲತಾ ಪ್ರಸನ್ನ, ತಿರುಮಲೇಶ್ವರಿ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಳಿಕ ಆಗಮಿಸಿದ ನ.ಪಂ.ಮುಖ್ಯಾಧಿಕಾರಿ ಮತ್ತಡಿಯವರನ್ನು ರಸ್ತೆ ಅಭಿವೃದ್ಧಿ ಪಡಿಸದ ಕುರಿತು ಪ್ರಶ್ನಿಸಿದರು. ಮಾತುಕತೆ ನಡೆದು ರಸ್ತೆ ದುರಸ್ಥಿ ನಡೆಸುವುದಾಗಿ ಮುಖ್ಯಾಧಿಕಾರಿ ಭರವಸೆ ನೀಡಿದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

2 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

3 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

3 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

5 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

5 hours ago