ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು. ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…