ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು. ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…