ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು. ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…