Advertisement
ರಾಷ್ಟ್ರೀಯ

ಗುರುಪೂರ್ಣಿಮೆಯಂದು ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು  ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ  ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ ಕಳೆದರು.  ಗುರು ಪೂರ್ಣಿಮಾ ದಿನದಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಜೊತೆ ಕಾಲ ಕಳೆದಿದ್ದಕ್ಕೆ ಹೆಮ್ಮೆಯಾಯಿತು. ಅವರಿಂದ ಕಲಿಯುವುದು ಹಾಗೂ ಅವರ ಅಲೋಚನೆಗಳ ಬಗ್ಗೆ ಕೇಳುವುದು ಒಳ್ಳೆಯ ಅನುಭವ ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಂಗಳೂರಿಗೆ ನರೇಂದ್ರ ಮೋದಿ ಅವರು ಭೇಟಿ ನೀಡಿದಾಗ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು.  ಭೇಟಿಯ ಸಂದರ್ಭ ರಾಮಮಂದಿರ ಸಹಿತ ಇತರ ವಿಚಾರಗಳನ್ನು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

6 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

7 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

13 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

16 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

16 hours ago