Advertisement
ಸುದ್ದಿಗಳು

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆ ಕಡಿತ ನಿರ್ಧಾರ ಹಿಂಪಡೆಯಲು ಆಗ್ರಹ

Share

ಸುಳ್ಯ; ಆರ್ಥಿಕ ಸಂಕಷ್ಟದ ನೆಪವೊಡ್ಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತ ಮಾಡುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆಗ್ರಹಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿರುವ 211 ಮಂದಿಯಲ್ಲಿ 86 ಮಂದಿಯನ್ನು ಕರ್ತವ್ಯದಿಂದ ವಿಮಕ್ತಿ ಮಾಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಅದರಲ್ಲೂ ಸುಳ್ಯದಲ್ಲಿ 28ರಲ್ಲಿ 20 ಮಂದಿಯನ್ನು ಬಿಟ್ಟು 8 ಮಂದಿಯನ್ನು ಮಾತ್ತ ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಸುಳ್ಯ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಸೂತ್ರವಾಗಿ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತ ಮಾಡಿದರೆ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಲಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆ ಕಡಿತದಿಂದ ಪೊಲೀಸರಿಗೆ ಹೆಚ್ಚು ಕೆಲಸದ ಒತ್ತಡ ಉಂಟಾಗಲಿದೆ. ಅಲ್ಲದೆ ಹಲವು ಮಂದಿ ಸಿಬ್ಬಂದಿಗಳು ಕೆಲಸ ಇಲ್ಲದೆ ಅತಂತ್ರರಾಗುವ ಪರಿಸ್ಥಿತಿ ಉಂಟಾಗಬಹುದು.

ಗೃಹರಕ್ಷಕ ದಳ ಸಿಬ್ಬಂದಿ ಸಂಖ್ಯೆ ಕಡಿತ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕಾಗಿ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಲಾಗುವುದು. ನಗರದ ಪ್ರತಿ ಪೆಟ್ರೋಲ್ ಪಂಪ್ ಗಳಲ್ಲಿ ಮನವಿಯನ್ನು ಇರಿಸಲಾಗುವುದು. ಸಾರ್ವಜನಿಜರು ಸಹಿ ಹಾಕಿ ಗೃಹರಕ್ಷಕ ದಳದ ಸಿಬ್ಬಂದಿಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಅವರು ಹೇಳಿದರು.

ಋಣಮುಕ್ತ ಕಾಯಿದೆ ಅನುಷ್ಠಾನ ಮಾಡಬೇಕು ಮತ್ತು ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಫೆ.‌25 ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಚಳವಳಿ ನಡೆಯಲಿದೆ. ಸುಳ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಫೆ.18 ರಂದು ಸುಳ್ಯದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಚಳವಳಿಯಲ್ಲಿ ಭಾಗವಹಿಸುವವರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಸೈನಾರ್ ಜಯನಗರ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 hour ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

2 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

9 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

9 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

20 hours ago