Advertisement
ಸುದ್ದಿಗಳು

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆ ಕಡಿತ ನಿರ್ಧಾರ ಹಿಂಪಡೆಯಲು ಆಗ್ರಹ

Share

ಸುಳ್ಯ; ಆರ್ಥಿಕ ಸಂಕಷ್ಟದ ನೆಪವೊಡ್ಡಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತ ಮಾಡುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಆಗ್ರಹಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿರುವ 211 ಮಂದಿಯಲ್ಲಿ 86 ಮಂದಿಯನ್ನು ಕರ್ತವ್ಯದಿಂದ ವಿಮಕ್ತಿ ಮಾಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಅದರಲ್ಲೂ ಸುಳ್ಯದಲ್ಲಿ 28ರಲ್ಲಿ 20 ಮಂದಿಯನ್ನು ಬಿಟ್ಟು 8 ಮಂದಿಯನ್ನು ಮಾತ್ತ ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಸುಳ್ಯ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಸೂತ್ರವಾಗಿ ನಿರ್ವಹಿಸುತ್ತಿದ್ದ ಗೃಹರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆಯನ್ನು ಕಡಿತ ಮಾಡಿದರೆ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಲಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳ ಸಂಖ್ಯೆ ಕಡಿತದಿಂದ ಪೊಲೀಸರಿಗೆ ಹೆಚ್ಚು ಕೆಲಸದ ಒತ್ತಡ ಉಂಟಾಗಲಿದೆ. ಅಲ್ಲದೆ ಹಲವು ಮಂದಿ ಸಿಬ್ಬಂದಿಗಳು ಕೆಲಸ ಇಲ್ಲದೆ ಅತಂತ್ರರಾಗುವ ಪರಿಸ್ಥಿತಿ ಉಂಟಾಗಬಹುದು.

ಗೃಹರಕ್ಷಕ ದಳ ಸಿಬ್ಬಂದಿ ಸಂಖ್ಯೆ ಕಡಿತ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕಾಗಿ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡಲಾಗುವುದು. ನಗರದ ಪ್ರತಿ ಪೆಟ್ರೋಲ್ ಪಂಪ್ ಗಳಲ್ಲಿ ಮನವಿಯನ್ನು ಇರಿಸಲಾಗುವುದು. ಸಾರ್ವಜನಿಜರು ಸಹಿ ಹಾಕಿ ಗೃಹರಕ್ಷಕ ದಳದ ಸಿಬ್ಬಂದಿಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಅವರು ಹೇಳಿದರು.

ಋಣಮುಕ್ತ ಕಾಯಿದೆ ಅನುಷ್ಠಾನ ಮಾಡಬೇಕು ಮತ್ತು ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಫೆ.‌25 ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಚಳವಳಿ ನಡೆಯಲಿದೆ. ಸುಳ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಫೆ.18 ರಂದು ಸುಳ್ಯದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಚಳವಳಿಯಲ್ಲಿ ಭಾಗವಹಿಸುವವರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಸೈನಾರ್ ಜಯನಗರ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

9 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

10 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

11 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

12 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

24 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

1 day ago