Advertisement
ಕಾರ್ಯಕ್ರಮಗಳು

ಗೃಹರಕ್ಷಕ ದಳ : ಸನ್ಮಾನ ಕಾರ್ಯಕ್ರಮ

Share

ಬೆಳ್ಳಾರೆ: ಫೆಬ್ರವರಿ 2 ರಂದು ಬೆಳ್ಳಾರೆ ಘಟಕದ ಹೂವಪ್ಪ ಗೌಡ ಇವರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು.

ಗೃಹರಕ್ಷಕ ಸಿಬ್ಬಂದಿಗಳು ಸಮಾಜದ ಎಲ್ಲಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ. ಪೊಲೀಸ್ ಇಲಾಖೆಯೊಂದಿಗೆ ಅತ್ಯಂತ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ನುಡಿದರು.

Advertisement

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸುದ್ದಿ ಸಮೂಹ ಸಂಸ್ಥೆಗಳ ಮಾಲಕ ಡಾ| ಯು.ಪಿ. ಶಿವಾನಂದ ಮಾತನಾಡಿ, ಸಮಾಜದಲ್ಲಿ ಒಳ್ಳೆಯದನ್ನು ಮೊದಲು ಗುರುತಿಸಿದಾಗ ತಪ್ಪುಗಳು ಕಡಿಮೆಯಾಗುತ್ತಾ ಬರುತ್ತವೆ. ಗೃಹರಕ್ಷಕ ಸಿಬ್ಬಂದಿಗಳಿಗೆ ಸಮಾಜದಲ್ಲಿ ಗೌರವ ಸಿಗುವಂತಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಹೂವಪ್ಪ ಗೌಡ ಮಾತನಾಡಿ, ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ನನಗೆ ತುಂಬಾ ಸಂತಸವಾಗಿದೆ ಮತ್ತು ನನ್ನ ಜವಾಬ್ದಾರಿ ಹೆಚ್ಚಾಗಿದ್ದು, ಇನ್ನು ಮುಂದೆ ಗೃಹರಕ್ಷಕ ದಳಕ್ಕಾಗಿ ಇನ್ನಷ್ಟು ಸೇವೆ ಮಾಡುವುದಾಗಿ ತಿಳಿಸಿದರು.

ಬೆಳ್ಳಾರೆ ಠಾಣಾ ಪ್ರೊಬೆಷನರಿ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬೆಳ್ಳಾರೆ ಜೇಸಿ ಸಂಸ್ಥೆಯ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಗೃಹರಕ್ಷಕ ದಳ ಬೆಳ್ಳಾರೆ ಘಟಕದ ಹೆಚ್. ನಾರಾಯಣ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬ್ರಹಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ವಸಂತ ಸ್ವಾಗತಿಸಿದರು. ವೀರನಾಥನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬೆಳ್ಳಾರೆ ಘಟಕದ ಎಲ್ಲ ಗೃಹರಕ್ಷಕರು ಹಾಗೂ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

14 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

18 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

22 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

1 day ago