ಗೆಜ್ಜೆಗಿರಿ ನಂದನ ಬಿತ್ತಲ್‍ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಚಾಲನೆ

Share

ಪುತ್ತೂರು: ದೇಯಿಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಲ್‍ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಸ್ತಪತಿ ಉಮೇಶ್ ಬಳ್ಪ ಮತ್ತವರ ತಂಡ ಮರದ ಕೆತ್ತನೆ ಆರಂಭಿಸಿತು. ಇದಕ್ಕೂ ಮುನ್ನ ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಮೇ 8ರಂದು ಗೆಜ್ಜೆಗಿರಿಯಲ್ಲಿ ಕೊಡಿಮರವನ್ನು ಎಳ್ಳೆಣ್ಣೆಯಲ್ಲಿ ಅದ್ದಿಡುವ ತೈಲಾಧಿವಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೊಡಿಮರವನ್ನು ಕೆತ್ತಿ ಸಿದ್ಧಪಡಿಸಲಾಗುತ್ತದೆ. ಮೇ 8ರಂದು ಬೆಳಗ್ಗೆ 9.30ಕ್ಕೆ ತೈಲಧಿವಾಸ ಮುಹೂರ್ತ ನಡೆಯಲಿದೆ.
ಪ್ರಸ್ತುತ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮಚಾವಡಿ, ಮಾತೆಯ ಮಹಾಸಮಾಧಿ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ದೈವಸ್ಥಾನ, ಚಾರಿತ್ರಿಕ ಸರೋಳಿ ಸೈಮಂಜಕಟ್ಟೆ, ಬೆರ್ಮೆರ್ ಗುಂಡ ಪುನರುತ್ಥಾನ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಮೂಲಸ್ಥಾನ ಗರಡಿ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ. 450 ವರ್ಷಗಳ ಹಿಂದೆ ಅವಳಿ ವೀರರು ಕೋಟಿ ಚೆನ್ನರು ಬಾಳಿ ಬೆಳಗಿದ ಕ್ಷೇತ್ರದಲ್ಲಿ ಮೂಲಸ್ಥಾನ ಪುನರುತ್ಥಾನ ಕಾರ್ಯ ಇದೇ ಮೊದಲ ಬಾರಿ ನಡೆಯುತ್ತಿದ್ದು, ಐತಿಹಾಸಿಕ ತಾಣಗಳು ಮತ್ತೆ ಜೀವ ಪಡೆದುಕೊಳ್ಳುತ್ತಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

6 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

12 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

13 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

13 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

23 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago