ಪುತ್ತೂರು: ದೇಯಿಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಲ್ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಸ್ತಪತಿ ಉಮೇಶ್ ಬಳ್ಪ ಮತ್ತವರ ತಂಡ ಮರದ ಕೆತ್ತನೆ ಆರಂಭಿಸಿತು. ಇದಕ್ಕೂ ಮುನ್ನ ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಮೇ 8ರಂದು ಗೆಜ್ಜೆಗಿರಿಯಲ್ಲಿ ಕೊಡಿಮರವನ್ನು ಎಳ್ಳೆಣ್ಣೆಯಲ್ಲಿ ಅದ್ದಿಡುವ ತೈಲಾಧಿವಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೊಡಿಮರವನ್ನು ಕೆತ್ತಿ ಸಿದ್ಧಪಡಿಸಲಾಗುತ್ತದೆ. ಮೇ 8ರಂದು ಬೆಳಗ್ಗೆ 9.30ಕ್ಕೆ ತೈಲಧಿವಾಸ ಮುಹೂರ್ತ ನಡೆಯಲಿದೆ.
ಪ್ರಸ್ತುತ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮಚಾವಡಿ, ಮಾತೆಯ ಮಹಾಸಮಾಧಿ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ದೈವಸ್ಥಾನ, ಚಾರಿತ್ರಿಕ ಸರೋಳಿ ಸೈಮಂಜಕಟ್ಟೆ, ಬೆರ್ಮೆರ್ ಗುಂಡ ಪುನರುತ್ಥಾನ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಮೂಲಸ್ಥಾನ ಗರಡಿ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ. 450 ವರ್ಷಗಳ ಹಿಂದೆ ಅವಳಿ ವೀರರು ಕೋಟಿ ಚೆನ್ನರು ಬಾಳಿ ಬೆಳಗಿದ ಕ್ಷೇತ್ರದಲ್ಲಿ ಮೂಲಸ್ಥಾನ ಪುನರುತ್ಥಾನ ಕಾರ್ಯ ಇದೇ ಮೊದಲ ಬಾರಿ ನಡೆಯುತ್ತಿದ್ದು, ಐತಿಹಾಸಿಕ ತಾಣಗಳು ಮತ್ತೆ ಜೀವ ಪಡೆದುಕೊಳ್ಳುತ್ತಿವೆ.
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…