Advertisement

ಗೆಜ್ಜೆಗಿರಿ ನಂದನ ಬಿತ್ತಲ್‍ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಚಾಲನೆ

Share

ಪುತ್ತೂರು: ದೇಯಿಬೈದ್ಯೆತಿ- ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಲ್‍ನಲ್ಲಿ ಕೊಡಿಮರ ಕೆತ್ತನೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಸ್ತಪತಿ ಉಮೇಶ್ ಬಳ್ಪ ಮತ್ತವರ ತಂಡ ಮರದ ಕೆತ್ತನೆ ಆರಂಭಿಸಿತು. ಇದಕ್ಕೂ ಮುನ್ನ ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಮೇ 8ರಂದು ಗೆಜ್ಜೆಗಿರಿಯಲ್ಲಿ ಕೊಡಿಮರವನ್ನು ಎಳ್ಳೆಣ್ಣೆಯಲ್ಲಿ ಅದ್ದಿಡುವ ತೈಲಾಧಿವಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಲೋಕೇಶ್ ಶಾಂತಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕೊಡಿಮರವನ್ನು ಕೆತ್ತಿ ಸಿದ್ಧಪಡಿಸಲಾಗುತ್ತದೆ. ಮೇ 8ರಂದು ಬೆಳಗ್ಗೆ 9.30ಕ್ಕೆ ತೈಲಧಿವಾಸ ಮುಹೂರ್ತ ನಡೆಯಲಿದೆ.
ಪ್ರಸ್ತುತ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮಚಾವಡಿ, ಮಾತೆಯ ಮಹಾಸಮಾಧಿ, ಧೂಮಾವತಿ ಮತ್ತು ಕುಪ್ಪೆ ಪಂಜುರ್ಲಿ ದೈವಸ್ಥಾನ, ಚಾರಿತ್ರಿಕ ಸರೋಳಿ ಸೈಮಂಜಕಟ್ಟೆ, ಬೆರ್ಮೆರ್ ಗುಂಡ ಪುನರುತ್ಥಾನ ಕಾರ್ಯ ಮುಕ್ತಾಯ ಹಂತದಲ್ಲಿದ್ದು, ಮೂಲಸ್ಥಾನ ಗರಡಿ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಶೀಘ್ರದಲ್ಲೇ ಆರಂಭಗೊಳ್ಳಲಿದೆ. 450 ವರ್ಷಗಳ ಹಿಂದೆ ಅವಳಿ ವೀರರು ಕೋಟಿ ಚೆನ್ನರು ಬಾಳಿ ಬೆಳಗಿದ ಕ್ಷೇತ್ರದಲ್ಲಿ ಮೂಲಸ್ಥಾನ ಪುನರುತ್ಥಾನ ಕಾರ್ಯ ಇದೇ ಮೊದಲ ಬಾರಿ ನಡೆಯುತ್ತಿದ್ದು, ಐತಿಹಾಸಿಕ ತಾಣಗಳು ಮತ್ತೆ ಜೀವ ಪಡೆದುಕೊಳ್ಳುತ್ತಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 hour ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

2 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

18 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago