ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

Advertisement
Advertisement

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

5 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

14 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

14 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

14 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

14 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

15 hours ago