Advertisement
ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago