ಕಾರ್ಯಕ್ರಮಗಳು

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

Advertisement
Advertisement

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

Advertisement

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

1 hour ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

5 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

9 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

9 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

9 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

17 hours ago