Advertisement
ಕಾರ್ಯಕ್ರಮಗಳು

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

Share

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

 

Advertisement

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

Advertisement

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

5 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

6 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

7 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

7 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago