Advertisement
ಕಾರ್ಯಕ್ರಮಗಳು

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

Share

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 minutes ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

7 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

7 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

7 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

18 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

18 hours ago