Advertisement
ಕಾರ್ಯಕ್ರಮಗಳು

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆ ಆಚರಣೆ

Share

ಪುತ್ತುರು: ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು26 ರಂದು ಆಚರಿಸಲಾಯಿತು.  ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಎ. ಸಿ. ಜೆ. ಎಮ್. ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ವಿಶೇಷ ಅತಿಥಿಗಳಾಗಿ  ಪ್ರಧಾನ ಹಿರಿಯ ನ್ಯಾಯಾಧೀಶರು ಮತ್ತು ಜೆ ಎಮ್ ಎಫ್ ಸಿ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರಿನ  ಪ್ರಕಾಶ್ ಪಿ. ಎಮ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರಿನ ವಕೀಲರು ಹಾಗೂ ಸದಸ್ಯರಾದ ಉದಯ ಶಂಕರ್ ಶೆಟ್ಟಿ, ಪುತ್ತೂರಿನ ಹೆಚ್ಚುವರಿ ಸರಕಾರಿ ಪ್ಲೀಡರ್ ಪ್ರವೀಣ್ ಕುಮಾರ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲರಾದ ಪ್ರೋ. ಕ್ಷೇವಿಯರ್ ಡಿ’ಸೋಜರವರು ಭಾಗವಹಿಸಿದ್ದರು. ಪುತ್ತೂರಿನ ವಕೀಲರ ಸಂಘದ  ಅಧ್ಯಕ್ಷರಾದ ಮನೋಹರ್ ಕೆ. ವಿ,  ಸುರೇಶ್ ರೈ, ಕಾರ್ಯದರ್ಶಿಗಳಾದ ಮಂಜುನಾಥ್ ಎನ್ ಎಸ್, ಸಹಕಾರ್ಯದರ್ಶಿ ಮಮತಾ ಸುವರ್ಣ,  ಇವರು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಸಂಸ್ಥೆಯ ನಿರ್ದೇಶಕರಾದ ಡಾ. ಎಮ್. ಜಿ ನಾಯಕ್ ರವರು ಅತಿಥಿಗಳನ್ನು ಸ್ವಾಗತಿಸುತ್ತಾ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ ಬಗ್ಗೆ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿದ  ಮಂಜುನಾಥ್ ಮಾತನಾಡುತ್ತಾ ಭಾರತವೊಂದು ಜಾತ್ಯತೀತ ರಾಷ್ಟ್ರವಾಗಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆಯೆಂದು ತಿಳಿಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ವಿದ್ಯಾಲಯ ಪುತ್ತೂರಿನ ಕಾನೂನು ಸೇವೆ ನಿರ್ದೇಶಕರಾದ ಡಾ. ಬಿ ಕೆ ರವೀಂದ್ರರವರು, “ಭಾರತದ ಸಂವಿಧಾನ ಮತ್ತು ಪ್ರಜೆಗಳ ಕರ್ತವ್ಯ” ಎನ್ನುವ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಭಾರತದ ಸಂವಿಧಾನವು ಪ್ರಪಂಚಕ್ಕೇ ಮಾದರಿಯಾಗಿದ್ದು ಪ್ರಜೆಗಳ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳಿಗೆ ಮಹತ್ವ ಕೊಟ್ಟಿದೆ. ಭಾರತದ ಸಂವಿಧಾನದೊಂದಿಗೆ ಅಮೆರಿಕಾ, ರಷ್ಯಾ ಹಾಗು ಫ್ರಾನ್ಸ್ ಸಂವಿಧಾನಗಳ ಬಗೆಗೂ ಮಾಹಿತಿ ನೀಡಿ ಅವುಗಳು ಪ್ರಜೆಗಳಿಗೆ ನೀಡಿದ ಹಕ್ಕುಗಳ ಬಗ್ಗೆ ತಿಳಿಹೇಳಿದರು. ಭಾರತದ ಸಂವಿಧಾನವು ಯಾವುದೇ ಬೇಧ ಭಾವ ಮಾಡದೇ ಸಮಾನ ನಾಗರಿಕ ಹಕ್ಕುಗಳನ್ನು ನೀಡಿದ್ದು ಅವುಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮನೋಹರ್ ಕೆವಿ, ಉದಯಶಂಕರ್ ಶೆಟ್ಟಿ ಹಾಗು ಪ್ರೊ. ಕ್ಷೇವಿಯರ್ ಡಿಸೋಜಾ ರವರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ವನಿತಾ ಕೆ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಂಸ್ಥೆಯ ಹಿರಿಯ ತಾಂತ್ರಿಕ ಅಧಿಕಾರಿ ಪ್ರಕಾಶ್ ಜಿ ಭಟ್ ರವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago