ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

June 14, 2020
11:29 AM

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ
July 31, 2026
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror