ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

June 14, 2020
11:29 AM

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

Advertisement

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಸುತ್ತಮುತ್ತ ಕೃಷಿ ಮಾಡುವ ರೈತರಿಗೆ ಕೃಷಿ ಭೂಮಿ ಮಂಜೂರಾತಿ : ಕೆಲ ಜಿಲ್ಲೆಗಳ ರೈತರಿಗೆ ಹಕ್ಕುಪತ್ರ ಬಿಡುಗಡೆ ಮಾಡಲಿರುವ ಕಂದಾಯ ಇಲಾಖೆ
March 26, 2024
11:59 PM
by: The Rural Mirror ಸುದ್ದಿಜಾಲ
ತಲಕಾವೇರಿಯಲ್ಲಿ ಮಳೆಗಾಗಿ ಪ್ರಾರ್ಥನೆ | ಈ ಬಾರಿಯಾದರು ವರುಣದೇವ ಕೃಪೆ ತೋರಲಿ..
March 26, 2024
10:33 AM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಅಂತರ್ಜಲ ಹೆಚ್ಚಳಕ್ಕೆ ಜಿಲ್ಲಾಧಿಕಾರಿಯ ದಿಟ್ಟ ಕ್ರಮ | ಮೂರು ವರ್ಷದಲ್ಲಿ ಆರು ಮೀಟರ್ ಅಂತರ್ಜಲ ಹೆಚ್ಚಳ
March 25, 2024
10:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror