Advertisement
ಕೃಷಿ

ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

Share

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

3 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

7 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago