Advertisement
ಕೃಷಿ

ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

Share

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

5 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

22 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago