Advertisement
ಕೃಷಿ

ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

Share

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

2 hours ago

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ

ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…

2 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…

3 hours ago

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

8 hours ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

9 hours ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

9 hours ago