Advertisement
ಕೃಷಿ

ಗೇರು ಸಂಶೋಧನಾ ನಿರ್ದೇಶನಾಲಯದಿಂದ ಕೃಷಿ ಸಲಕರಣೆಗಳ ವಿತರಣೆ

Share

ಪುತ್ತೂರು: ಕೇಂದ್ರ ಸರಕಾರದ ಪರಿಶಿಷ್ಠ ಜಾತಿ ಉಪಯೋಜನೆಯಡಿಯಲ್ಲಿ ಕೊಡಮಾಡುವ ಸವಲತ್ತುಗಳನ್ನು ಪುತ್ತೂರಿನ ಮೊಟ್ಟೆತ್ತಡ್ಕದ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಫಲಾನುಭವಿಗಳಿಗೆ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್ ರವರು ವಿತರಿಸಿದರು.
ಈ ಸಂದರ್ಭ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್,  ಪರಿಶಿಷ್ಟ ಜಾತಿಯವರು ಸಮಾಜದಲ್ಲಿ ಆತ್ಮಗೌರವದಿಂದ ಬಾಳಲು ಕೇಂದ್ರ ಸರ್ಕಾರ ಸಾಕಷ್ಟು ನೆರವನ್ನು ಕೊಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅವರು ಆಯ್ದ ರೈತರಿಗೆ ತೋಟಗಳಿಗೆ ಔಷಧಿ ಸಿಂಪಡಣಾ ಯಂತ್ರಗಳನ್ನು ಮತ್ತು ಮರವೇರುವ ಅಲ್ಯುಮಿನಿಯಂನ ಏಣಿಗಳನ್ನು ವಿತರಿಸಿದರು.

ಅತಿಥಿಗಳನ್ನು ಹಾಗೂ ಫಲಾನುಭವಿಗಳನ್ನು ಸ್ವಾಗತಿಸಿದ ಸಂಸ್ಥೆಯ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷದಿಂದ ನಡೆಯುತ್ತಿರುವ ಈ ಉಪಯೋಜನೆಗಳ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಮುಂದಿನ ವರ್ಷದಲ್ಲಿ ಪರಿಶಿಷ್ಟ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಬಹಳಷ್ಟು ಧನ ಸಹಾಯ ಕೇಂದ್ರದಿಂದ ಬಂದಿದ್ದು ಕಾರ್ಯಕ್ರಮವು ನಿರಂತರವಾಗಿ ನಡೆಯಲಿದೆಯೆಂದರು. ಗೇರು ಅಥವಾ ಇತರ ಕೃಷಿ ತೋಟಗಳ ನಿರ್ಮಾಣ, ನಿರ್ವಹಣೆ, ಬೇಕಾದ ಸಲಕರಣೆಗಳು, ಯಂತ್ರ ಉಪಕರಣಗಳು, ಕೋಳಿ, ಆಡು ಸಾಕಾಣಿಕೆ, ಹೈನುಗಾರಿಕೆ, ಜೇನು ಸಾಕಾಣೆ, ವೃತ್ತಿ ತರಬೇತಿ, ಟೈಲರಿಂಗ್ ಮುಂತಾದ ಕಸುಬು ಮಾಡುವವರಿಗೆ ಈ ಯೋಜನೆಗಳು ಜೀವನವನ್ನು ಸುಧಾರಿಸುವಲ್ಲಿ ಹೆಚ್ಚು ಸಹಾಯವಾಗಲಿದೆಯೆಂದರು.

ಕಾರ್ಯಕ್ರಮವನ್ನು  ಡಾ. ಈ. ಈರದಾಸಪ್ಪ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

2 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

4 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

7 hours ago