ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.
ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…