Advertisement
Categories: ರಾಜ್ಯ

ಗೋಕರ್ಣ ವಿವಾದ | ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

Share

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠ ವಜಾ ಮಾಡಿದೆ. ಈ ಮೂಲಕ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಗೆ ಜಯ ಸಿಕ್ಕಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿನ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪ ಸಲ್ಲಿಸಿತ್ತು.
ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು.
ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕತಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡಾ ತಿರಸ್ಕರಿಸಿದೆ.
\

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

3 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

9 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

19 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago