ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್ನ ಧಾರವಾಡ ಪೀಠ ವಜಾ ಮಾಡಿದೆ. ಈ ಮೂಲಕ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಗೆ ಜಯ ಸಿಕ್ಕಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿನ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪ ಸಲ್ಲಿಸಿತ್ತು.
ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು.
ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕತಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡಾ ತಿರಸ್ಕರಿಸಿದೆ.
\
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…