Advertisement
Categories: ರಾಜ್ಯ

ಗೋಕರ್ಣ ವಿವಾದ | ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

Share

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠ ವಜಾ ಮಾಡಿದೆ. ಈ ಮೂಲಕ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಗೆ ಜಯ ಸಿಕ್ಕಿದೆ.
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿನ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪ ಸಲ್ಲಿಸಿತ್ತು.
ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು.
ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕತಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡಾ ತಿರಸ್ಕರಿಸಿದೆ.
\

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

6 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

6 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

7 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

15 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

15 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago