ಮಡಿಕೇರಿ :ದಕ್ಷಿಣ ಕೊಡಗಿನ ಗೋಣಿಕೊಪ್ಪಲಿನಲ್ಲಿ ನಡೆಯುವ ನಾಡ ಉತ್ಸವ ದಸರಾ ಆಚರಣೆಗೆ 30 ಲಕ್ಷ ರೂ. ಅನುದಾನವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರ ನೇತೃತ್ವದ ನಿಯೋಗ ಬುಧವಾರ ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿರುವ ಮನೆಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಗೋಣಿಕೊಪ್ಪಲು ದಸರಾ ಉತ್ಸವದ ಸಾಂಸ್ಕೃತಿಕ ಹಿನ್ನೆಲೆ, ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಟ್ಟರಲ್ಲದೆ, ಲಿಖಿತ ಮನವಿಯನ್ನು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ವರ್ಷ ಕಳೆದ ಸಾಲಿಗಿಂತ 10 ಲಕ್ಷದಷ್ಟು ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸುತ್ತಿರುವ ಬಗ್ಗೆ ನಿಯೋಗ ಸಂತಸ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿಗಳ ಭೇಟಿಯ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ.ಹರೀಶ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…