ಸುಳ್ಯ: ಇಂದು ಮುಂಜಾನೆ ನಿಧನರಾದ ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ಅವರ ಅಂತ್ಯ ಸಂಸ್ಕಾರ ಅಜ್ಜಾವರ ಗ್ರಾಮದ ಗೋರಡ್ಕದಲ್ಲಿ ನಡೆಯಿತು.
ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು.ಆಸ್ಪತ್ರೆಯಿಂದ ಮೃತದೇಹವನ್ನು ಗೋರಡ್ಕ ಮನೆಗೆ ಕೊಂಡೊಯ್ಯಲಾಯಿತು. ಸಂಬಂಧಿಕರು, ಮಿತ್ರರು, ಸಾರ್ವಜನಿಕರು ಸೇರಿ ನೂರಾರು ಮಂದಿ ಮೃತರ ಅಂತಿಮ ದರ್ಶನ ಪಡೆದರು.
3.30 ಕ್ಕೆ ಶ್ರದ್ಧಾಂಜಲಿ ಸಭೆ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚಂದ್ರೇಶ್ ಗೋರಡ್ಕ ಅವರಿಗೆ ಶ್ರದ್ಧಾಂಜಲಿ ಸಭೆ ಇಂದು 3.30 ಕ್ಕೆ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಅಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ತಿಳಿಸಿದ್ದಾರೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…