ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…