ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…