ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…