ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…