ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…