ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್ ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…