ಸುಳ್ಯ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಗೆ ಹಾನಿ ಸಂಭವಿಸಿದ ಘಟನೆ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.
ಸೋಮವಾರ ಸಂಜೆಯ ವೇಳೆಗೆ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹಬ್ಬಿ ಮನೆ ಸುಟ್ಟು ಹೋಗಿದೆ.
ಸಂಜೆ 4 ಗಂಟೆಯ ವೇಳೆಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತ್ತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಒಡೆದು ತುಂಡಾದ ಸ್ಥಿತಿಯಲ್ಲಿತ್ತು. ಸಿಲಿಂಡರ್ ಒಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ ಮತ್ತು ಮನೆಗೆ ಹಾನಿ ಸಂಭವಿಸಿದೆ. ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹಬ್ಬಿತ್ತು. ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುವುದು ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…