ಸುಳ್ಯ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಗೆ ಹಾನಿ ಸಂಭವಿಸಿದ ಘಟನೆ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.
ಸೋಮವಾರ ಸಂಜೆಯ ವೇಳೆಗೆ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹಬ್ಬಿ ಮನೆ ಸುಟ್ಟು ಹೋಗಿದೆ.
ಸಂಜೆ 4 ಗಂಟೆಯ ವೇಳೆಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತ್ತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಒಡೆದು ತುಂಡಾದ ಸ್ಥಿತಿಯಲ್ಲಿತ್ತು. ಸಿಲಿಂಡರ್ ಒಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ ಮತ್ತು ಮನೆಗೆ ಹಾನಿ ಸಂಭವಿಸಿದೆ. ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹಬ್ಬಿತ್ತು. ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುವುದು ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…