ಸುಳ್ಯ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಮನೆಗೆ ಹಾನಿ ಸಂಭವಿಸಿದ ಘಟನೆ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.
ಸೋಮವಾರ ಸಂಜೆಯ ವೇಳೆಗೆ ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹಬ್ಬಿ ಮನೆ ಸುಟ್ಟು ಹೋಗಿದೆ.
ಸಂಜೆ 4 ಗಂಟೆಯ ವೇಳೆಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತ್ತು. ಮನೆಯ ಒಳಗೆ ಗ್ಯಾಸ್ ಸಿಲಿಂಡರ್ ಒಡೆದು ತುಂಡಾದ ಸ್ಥಿತಿಯಲ್ಲಿತ್ತು. ಸಿಲಿಂಡರ್ ಒಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ ಮತ್ತು ಮನೆಗೆ ಹಾನಿ ಸಂಭವಿಸಿದೆ. ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹಬ್ಬಿತ್ತು. ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆಯ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುವುದು ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…