ಗ್ಯಾಸ್ ಸ್ಟೌವ್ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡ‌ ಬಾಲಕ

October 15, 2019
11:41 AM

ತುಮಕೂರು: ಅಮ್ಮಾ ನಾನೇ ಮ್ಯಾಗಿ ಮಾಡುತ್ತೀನಿ ಎಂದು ಗ್ಯಾಸ್ ಸ್ಟೌವ್ ಹಚ್ಚಿದ ಬಾಲಕ ಮೃತಪಟ್ಟ ಘಟನೆ ತುಮಕೂರು ನಗರದ ಕ್ರಿಶ್ಚಿಯನ್ ಸ್ಟ್ರೀಟ್‍ನಲ್ಲಿ ನಡೆದಿದೆ.

ನೋಯಲ್ ಪ್ರಸಾದ್(7) ಮೃತಪಟ್ಟ ಬಾಲಕ. ನೋಯಲ್ ಅಮ್ಮಾ ನಾನೇ ಮ್ಯಾಗಿ ತಯಾರಿಸುತ್ತೇನೆ ಎಂದು ತನ್ನ ತಾಯಿ ಬಳಿ ಹೇಳಿ ಗ್ಯಾಸ್ ಸ್ಟೌಚ್ ಹಚ್ಚಿದ್ದಾನೆ. ಈ ವೇಳೆ ಗ್ಯಾಸ್ ಸೋರಿಕೆ ಆಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.

ನೋಯಲ್ ಗ್ಯಾಸ್ ಸ್ಟೌವ್ ಆನ್ ಮಾಡಿದ ನಂತರ ಲೈಟರ್ ನಲ್ಲಿ ಬೆಂಕಿ ಹಚ್ಚುವುದಕ್ಕೆ ಲೇಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಗ್ಯಾಸ್ ಲೀಕ್ ಆಗಿ ನೋಯಲ್ ಸುತ್ತಮುತ್ತ ಹರಡಿಕೊಂಡಿದೆ. ನಿಧಾನವಾಗಿ ಬೆಂಕಿ ಹಚ್ಚಿದಕ್ಕೆ ನೋಯಲ್ ಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಿಂದ ನೋಯಲ್‍ನನ್ನು ರಕ್ಷಣೆ ಮಾಡುವಷ್ಟರಲ್ಲಿ ಆತನಿಗೆ ತುಂಬಾ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆತನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೋಯಲ್ ಮೃತಪಟ್ಟಿದ್ದಾನೆ.

ಈ ಬಗ್ಗೆ ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror