ತುಮಕೂರು: ಅಮ್ಮಾ ನಾನೇ ಮ್ಯಾಗಿ ಮಾಡುತ್ತೀನಿ ಎಂದು ಗ್ಯಾಸ್ ಸ್ಟೌವ್ ಹಚ್ಚಿದ ಬಾಲಕ ಮೃತಪಟ್ಟ ಘಟನೆ ತುಮಕೂರು ನಗರದ ಕ್ರಿಶ್ಚಿಯನ್ ಸ್ಟ್ರೀಟ್ನಲ್ಲಿ ನಡೆದಿದೆ.
ನೋಯಲ್ ಪ್ರಸಾದ್(7) ಮೃತಪಟ್ಟ ಬಾಲಕ. ನೋಯಲ್ ಅಮ್ಮಾ ನಾನೇ ಮ್ಯಾಗಿ ತಯಾರಿಸುತ್ತೇನೆ ಎಂದು ತನ್ನ ತಾಯಿ ಬಳಿ ಹೇಳಿ ಗ್ಯಾಸ್ ಸ್ಟೌಚ್ ಹಚ್ಚಿದ್ದಾನೆ. ಈ ವೇಳೆ ಗ್ಯಾಸ್ ಸೋರಿಕೆ ಆಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.
ನೋಯಲ್ ಗ್ಯಾಸ್ ಸ್ಟೌವ್ ಆನ್ ಮಾಡಿದ ನಂತರ ಲೈಟರ್ ನಲ್ಲಿ ಬೆಂಕಿ ಹಚ್ಚುವುದಕ್ಕೆ ಲೇಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಗ್ಯಾಸ್ ಲೀಕ್ ಆಗಿ ನೋಯಲ್ ಸುತ್ತಮುತ್ತ ಹರಡಿಕೊಂಡಿದೆ. ನಿಧಾನವಾಗಿ ಬೆಂಕಿ ಹಚ್ಚಿದಕ್ಕೆ ನೋಯಲ್ ಗೆ ಬೆಂಕಿ ಹೊತ್ತಿಕೊಂಡಿದೆ.
ಈ ಘಟನೆಯಿಂದ ನೋಯಲ್ನನ್ನು ರಕ್ಷಣೆ ಮಾಡುವಷ್ಟರಲ್ಲಿ ಆತನಿಗೆ ತುಂಬಾ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆತನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೋಯಲ್ ಮೃತಪಟ್ಟಿದ್ದಾನೆ.
ಈ ಬಗ್ಗೆ ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…