Advertisement
ಸುದ್ದಿಗಳು

ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಪ್ಲೀಸ್ : ಅಧಿಕಾರಿಗಳಿಗೆ ಕಾಂಗ್ರೆಸ್ ಮನವಿ

Share

ಸುಳ್ಯ: ಗ್ರಾಮಗಳಲ್ಲಿ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ತೆರಳಿ, ಸಾಧ್ಯವಾದರೆ ಗ್ರಾಮಗಳಲ್ಲಿ ಒಂದು ದಿನ ವಾಸ್ತವ್ಯ ಮಾಡಿ.‌ ಜನರ ಜ್ವಲಂತ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಪ್ರಯತ್ನಿಸಿ. ಹೀಗೊಂದು ಮನವಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ತಹಶೀಲ್ದಾರ್ ರಿಗೆ ಸಲ್ಲಿಸಲಾಗಿದೆ.

Advertisement

ಸುಳ್ಯ ತಾಲೂಕಿನ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಇಲಾಖೆಗಳ ವಿವಿಧ ಸೌಲಭ್ಯದ ಬಗ್ಗೆ ಜನರಿಗೆ ತಿಳಿಸಬೇಕು. ತಹಸೀಲ್ದಾರ್ ನೇತೃತ್ವದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಹೊಸ ಒಂದು ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಅವರಿಗೆ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ , ಧೀರಾ ಕ್ರಾಸ್ತಾ , ಮಾಜಿ ಸದಸ್ಯರಾದ ಕೆ.ಎಂ.ಮುಸ್ತಾಫಾ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ಆನಂದ ಕೆಂಬಾರೆ , ಇಬ್ರಾಹಿಂ ಶಿಲ್ಪಾ , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

10 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

16 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

20 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

20 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago