Advertisement
ಸುದ್ದಿಗಳು

ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಪ್ಲೀಸ್ : ಅಧಿಕಾರಿಗಳಿಗೆ ಕಾಂಗ್ರೆಸ್ ಮನವಿ

Share

ಸುಳ್ಯ: ಗ್ರಾಮಗಳಲ್ಲಿ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ತೆರಳಿ, ಸಾಧ್ಯವಾದರೆ ಗ್ರಾಮಗಳಲ್ಲಿ ಒಂದು ದಿನ ವಾಸ್ತವ್ಯ ಮಾಡಿ.‌ ಜನರ ಜ್ವಲಂತ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಪ್ರಯತ್ನಿಸಿ. ಹೀಗೊಂದು ಮನವಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ತಹಶೀಲ್ದಾರ್ ರಿಗೆ ಸಲ್ಲಿಸಲಾಗಿದೆ.

ಸುಳ್ಯ ತಾಲೂಕಿನ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಇಲಾಖೆಗಳ ವಿವಿಧ ಸೌಲಭ್ಯದ ಬಗ್ಗೆ ಜನರಿಗೆ ತಿಳಿಸಬೇಕು. ತಹಸೀಲ್ದಾರ್ ನೇತೃತ್ವದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಹೊಸ ಒಂದು ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಅವರಿಗೆ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ , ಧೀರಾ ಕ್ರಾಸ್ತಾ , ಮಾಜಿ ಸದಸ್ಯರಾದ ಕೆ.ಎಂ.ಮುಸ್ತಾಫಾ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ಆನಂದ ಕೆಂಬಾರೆ , ಇಬ್ರಾಹಿಂ ಶಿಲ್ಪಾ , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

4 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

5 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

5 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

9 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago