Advertisement
ಸುದ್ದಿಗಳು

ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾ.ಪಂ.ಸದಸ್ಯನ ಜವಾಬ್ದಾರಿ ಮಹತ್ತರವಾದುದು- ಕೋಟ ಶ್ರೀನಿವಾಸ ಪೂಜಾರಿ

Share

ಬಾಳಿಲ: ತ್ರಿಸ್ತರ ಪಂಚಾಯತ್ ವ್ಯವಸ್ಥೆಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯತ್ ಸದಸ್ಯನ ಜವಾಬ್ದಾರಿ ಮಹತ್ತರವಾದುದು. ಗ್ರಾಮದ ಅಭಿವೃದ್ಧಿಯಲ್ಲಿ  ಆತನ ಜವಾಬ್ದಾರಿ ಮಹತ್ವದ್ದಾಗಿದೆ.  ಗ್ರಾಮ ಪಂಚಾಯತ್‍ಗಳು ಇಡೀ ಆಡಳಿತ ವ್ಯವಸ್ಥೆಯ ತಳಹದಿ ಎಂದು ಕರ್ನಾಟಕ ವಿಧಾನ ಪರಿಷತ್‍ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಬಾಳಿಲ ಗ್ರಾಮ ಪಂಚಾಯತ್‍ನ ನೂತನ ಕಟ್ಟಡ ಮತ್ತು ಆರ್.ಜಿ.ಎಸ್.ವೈ ಅನುದಾನದಿಂದ ನಿರ್ಮಾಣಗೊಂಡ ಮಿನಿ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಿನಿ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ಜನರ ಪ್ರಥಮ ಪರಿಹಾರ ಕೇಂದ್ರ. ಸಾರ್ವಜನಿಕರಿಗೆ ಪೂರಕವಾಗುವ ರೀತಿಯಲ್ಲಿ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸಬೇಕು ಎಂದರು.
ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಸದ ನಳಿನ್‍ಕುಮಾರ್ ಕಟೀಲ್ ಗ್ರಾಮ ಪಂಚಾಯತ್ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಆಡಳಿತ ಹಾಗು ಪ್ರತಿಪಕ್ಷ ಜೊತೆಯಾಗಿ ಕಾರ್ಯಪ್ರವೃತ್ತರಾದಲ್ಲಿ ಆ ಗ್ರಾಮ ಆದರ್ಶ ಗ್ರಾಮವಾಗುವುದು. ಕ್ರಿಯಾತ್ಮಕ ರಾಜಕಾರಣವಿದ್ದಲ್ಲಿ ಅಭಿವೃದ್ಧಿಯ ಸಮೃದ್ದಿಯಾಗುವುದು ಎಂದರು.
ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೂನತ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಟ್ಟಡ ನಿರ್ಮಾಣಕ್ಕೆ ಸ್ಥಳದಾನಗೈದ ಕೆದ್ಲ ನರಸಿಂಹ ಭಟ್ ಹಾಗು ಗುತ್ತಿಗೆದಾರ ಶಬ್ಬೀರ್ ಅವರನ್ನು ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಅಂಗಾರ ವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದ ಎಸ್.ರೈ, ಸದಸ್ಯೆ ಜಾಹ್ನವಿ ಕಾಂಚೋಡು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ಮಧುಕುಮಾರ್, ಸುಳ್ಯ ಪಂಚಾಯತ್‍ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ.ಹನುಮಂತರಾಯಪ್ಪ, ಕಳಂಜ ಬಾಳಿಲ ಪ್ರಾ. ಕೃ.ಪ.ಸ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ, ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷೆ ಹೇಮಲತಾ ಕಾಯಾರ ಉಪಸ್ಥಿತರಿದ್ದರು.
ರವೀಂದ್ರ ಸ್ವಾಗತಿಸಿ, ರಮೇಶ್ ರೈ ಅಗಲ್ಪಾಡಿ ವಂದಿಸಿದರು. ಯು.ರಾಧಾಕೃಷ್ಣ ರಾವ್ ಪ್ರಸ್ತಾವನೆಗೈದು, ಪಿಡಿಒ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

2 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

4 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

9 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

15 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago