ಕೃಷಿ

#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಇದೊಂದು ಕ್ರಾಂತಿಕಾರಕ ಹೆಜ್ಜೆ…!. ಲಾಕ್ಡೌನ್ ನಂತರ ಕೈಗೊಂಡ ಸ್ವಾವಲಂಬನೆಯ ಪಥದ ಹೆಜ್ಜೆ. ಆತ್ಮನಿರ್ಭರ ಭಾರತದ ಕಡೆಗಿನ ಹೆಜ್ಜೆ ಇದು. ಸುಳ್ಯ ತಾಲೂಕಿನ ಸುಮಾರು 6000 ಕುಟುಂಬಗಳು ತರಕಾರಿಯಲ್ಲಿ  ಸ್ವಾವಲಂಬನೆಯನ್ನು  ಹೊಂದಲಿದೆ. ಸುಳ್ಯ ತಾಲೂಕಿನ ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ ತರಕಾರಿ ಬೀಜ ವಿತರಣೆಯಾಗಿ ತರಕಾರಿ ಕೃಷಿ ಈ ಮಳೆಗಾಲ ಕಾಣಲಿದೆ. ಉಳಿದ ತರಕಾರಿಗಳು ಸಹಕಾರಿ ಸಂಘಗಳ ಮೂಲಕ, ಸ್ಥಳೀಯ ಅಂಗಡಿಗಳ ಮೂಲಕ ಜನರಿಗೂ ಸಿಗಲಿದೆ.
Advertisement

ಸುಳ್ಯ ತಾಲೂಕಿನಲ್ಲಿ  ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ  ಈ ಬಾರಿ ತರಕಾರಿ ಬೀಜಗಳ ವಿತರಣೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿದ್ದು ತರಕಾರಿ ಬೀಜಗಳ ಸಂಗ್ರಹ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಸಕ್ತ ಕೃಷಿಕರು ತರಕಾರಿ ಬೀಜವನ್ನು ಬಿತ್ತುವಂತೆ ಹಾಗೂ ತರಕಾರಿ ಬೆಳೆಯನ್ನು  ಬೆಳೆಯುವಂತೆ ಉತ್ತೇಜನ ನೀಡಲಾಗಿದೆ. ಆತ್ಮನಿರ್ಭರ ಭಾರತ ಹೆಜ್ಜೆಯಾಗಿರುವ ಈ ಯೋಜನೆಯಲ್ಲಿ ಆಸಕ್ತ ಕೃಷಿಕರು ತೊಡಗಿಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ಅಲಸಂಡೆ, ಪಡುವಲಕಾಯಿ, ಹಾಗಲಕಾಯಿ, ಬೆಂಡೆಕಾಯಿ, ಸೋರೆಕಾಯಿ, ಬದನೆ, ಚೀನೀಕಾಯಿ ಸೇರಿದಂತೆ ವಿವಿಧ ತರಕಾರಿ ಬೀಜಗಳು ಲಭ್ಯವಾಗಲಿದೆ.  ಗುಣಮಟ್ಟದ ತರಕಾರಿ ಬೀಜಗಳನ್ನೇ ಆಯ್ಕೆ ಮಾಡಲಾಗಿದ್ದು ಜೂ.8 ರ ಬಳಿಕ ವಿವಿಧ ಸಹಕಾರಿ ಸಂಘ ಹಾಗೂ ಗ್ರಾಮ ವಿಕಾಸ ಸಮಿತಿಗಳ ಆಶ್ರಯದಲ್ಲಿ  ಕೃಷಿಕರಿಗೆ ವಿತರಣೆಯಾಗಲಿದೆ. ಈಗಿನ ಅಂದಾಜು ಪ್ರಕಾರ ತಾಲೂಕಿನ ಸುಮಾರು 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ ಮಾಡುವ ಗುರಿ ಹೊಂದಲಾಗಿದೆ.  ಇದಕ್ಕಾಗಿ ಸಹಕಾರಿ ಸಂಘಗಳೂ ಸಹಕಾರ ನೀಡಲಿದೆ.

ಜೂ.8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ  ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.

ತರಕಾರಿ ಬೆಳೆಯು ಕೃಷಿಕರಿಗೆ ಸ್ವಾವಲಂಬನೆಯ ದಾರಿಯನ್ನು  ಹೇಳುವುದಲ್ಲದೆ ಉತ್ತಮ ಆದಾಯವನ್ನೂ ತರಬಲ್ಲುದು. ಆತ್ಮನಿರ್ಭರ ಭಾರತದ ಉದ್ದೇಶಕ್ಕೂ ಪೂರಕವಾಗಲಿದೆ. ಕೃಷಿಕರು ತರಕಾರಿ ಬೆಳೆದು ತಾವು ಉಪಯೋಗಿಸಿ ಹೆಚ್ಚಾಗಿರುವ ತರಕಾರಿಯನ್ನು ಮಾರಾಟ ಮಾಡಲು ಕೂಡಾ ಅವಕಾಶವೂ ಸಿಗಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

20 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

20 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

20 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

20 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

20 hours ago