ಕೃಷಿ

#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಇದೊಂದು ಕ್ರಾಂತಿಕಾರಕ ಹೆಜ್ಜೆ…!. ಲಾಕ್ಡೌನ್ ನಂತರ ಕೈಗೊಂಡ ಸ್ವಾವಲಂಬನೆಯ ಪಥದ ಹೆಜ್ಜೆ. ಆತ್ಮನಿರ್ಭರ ಭಾರತದ ಕಡೆಗಿನ ಹೆಜ್ಜೆ ಇದು. ಸುಳ್ಯ ತಾಲೂಕಿನ ಸುಮಾರು 6000 ಕುಟುಂಬಗಳು ತರಕಾರಿಯಲ್ಲಿ  ಸ್ವಾವಲಂಬನೆಯನ್ನು  ಹೊಂದಲಿದೆ. ಸುಳ್ಯ ತಾಲೂಕಿನ ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ ತರಕಾರಿ ಬೀಜ ವಿತರಣೆಯಾಗಿ ತರಕಾರಿ ಕೃಷಿ ಈ ಮಳೆಗಾಲ ಕಾಣಲಿದೆ. ಉಳಿದ ತರಕಾರಿಗಳು ಸಹಕಾರಿ ಸಂಘಗಳ ಮೂಲಕ, ಸ್ಥಳೀಯ ಅಂಗಡಿಗಳ ಮೂಲಕ ಜನರಿಗೂ ಸಿಗಲಿದೆ.
Advertisement
Advertisement

ಸುಳ್ಯ ತಾಲೂಕಿನಲ್ಲಿ  ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ  ಈ ಬಾರಿ ತರಕಾರಿ ಬೀಜಗಳ ವಿತರಣೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿದ್ದು ತರಕಾರಿ ಬೀಜಗಳ ಸಂಗ್ರಹ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಸಕ್ತ ಕೃಷಿಕರು ತರಕಾರಿ ಬೀಜವನ್ನು ಬಿತ್ತುವಂತೆ ಹಾಗೂ ತರಕಾರಿ ಬೆಳೆಯನ್ನು  ಬೆಳೆಯುವಂತೆ ಉತ್ತೇಜನ ನೀಡಲಾಗಿದೆ. ಆತ್ಮನಿರ್ಭರ ಭಾರತ ಹೆಜ್ಜೆಯಾಗಿರುವ ಈ ಯೋಜನೆಯಲ್ಲಿ ಆಸಕ್ತ ಕೃಷಿಕರು ತೊಡಗಿಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ಅಲಸಂಡೆ, ಪಡುವಲಕಾಯಿ, ಹಾಗಲಕಾಯಿ, ಬೆಂಡೆಕಾಯಿ, ಸೋರೆಕಾಯಿ, ಬದನೆ, ಚೀನೀಕಾಯಿ ಸೇರಿದಂತೆ ವಿವಿಧ ತರಕಾರಿ ಬೀಜಗಳು ಲಭ್ಯವಾಗಲಿದೆ.  ಗುಣಮಟ್ಟದ ತರಕಾರಿ ಬೀಜಗಳನ್ನೇ ಆಯ್ಕೆ ಮಾಡಲಾಗಿದ್ದು ಜೂ.8 ರ ಬಳಿಕ ವಿವಿಧ ಸಹಕಾರಿ ಸಂಘ ಹಾಗೂ ಗ್ರಾಮ ವಿಕಾಸ ಸಮಿತಿಗಳ ಆಶ್ರಯದಲ್ಲಿ  ಕೃಷಿಕರಿಗೆ ವಿತರಣೆಯಾಗಲಿದೆ. ಈಗಿನ ಅಂದಾಜು ಪ್ರಕಾರ ತಾಲೂಕಿನ ಸುಮಾರು 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ ಮಾಡುವ ಗುರಿ ಹೊಂದಲಾಗಿದೆ.  ಇದಕ್ಕಾಗಿ ಸಹಕಾರಿ ಸಂಘಗಳೂ ಸಹಕಾರ ನೀಡಲಿದೆ.

ಜೂ.8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ  ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.

ತರಕಾರಿ ಬೆಳೆಯು ಕೃಷಿಕರಿಗೆ ಸ್ವಾವಲಂಬನೆಯ ದಾರಿಯನ್ನು  ಹೇಳುವುದಲ್ಲದೆ ಉತ್ತಮ ಆದಾಯವನ್ನೂ ತರಬಲ್ಲುದು. ಆತ್ಮನಿರ್ಭರ ಭಾರತದ ಉದ್ದೇಶಕ್ಕೂ ಪೂರಕವಾಗಲಿದೆ. ಕೃಷಿಕರು ತರಕಾರಿ ಬೆಳೆದು ತಾವು ಉಪಯೋಗಿಸಿ ಹೆಚ್ಚಾಗಿರುವ ತರಕಾರಿಯನ್ನು ಮಾರಾಟ ಮಾಡಲು ಕೂಡಾ ಅವಕಾಶವೂ ಸಿಗಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

9 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

10 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

10 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

15 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

15 hours ago

ಜೂನ್ ನಲ್ಲಿ ಗ್ರಹಗಳ ಮಹಾ ಸಂಯೋಗ | ಈ 3 ರಾಶಿಗೆ ಭರ್ಜರಿ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago