Advertisement
ಕೃಷಿ

#ಗ್ರಾಮವಿಕಾಸ | ಲಾಕ್ಡೌನ್ ನಂತರ ಸುಳ್ಯದಲ್ಲಿ ಸ್ವಾವಲಂಬನೆಯ ಹೆಜ್ಜೆ | ಇದು ಆತ್ಮನಿರ್ಭರ ಭಾರತದ ಹೆಜ್ಜೆ |

Share
ಇದೊಂದು ಕ್ರಾಂತಿಕಾರಕ ಹೆಜ್ಜೆ…!. ಲಾಕ್ಡೌನ್ ನಂತರ ಕೈಗೊಂಡ ಸ್ವಾವಲಂಬನೆಯ ಪಥದ ಹೆಜ್ಜೆ. ಆತ್ಮನಿರ್ಭರ ಭಾರತದ ಕಡೆಗಿನ ಹೆಜ್ಜೆ ಇದು. ಸುಳ್ಯ ತಾಲೂಕಿನ ಸುಮಾರು 6000 ಕುಟುಂಬಗಳು ತರಕಾರಿಯಲ್ಲಿ  ಸ್ವಾವಲಂಬನೆಯನ್ನು  ಹೊಂದಲಿದೆ. ಸುಳ್ಯ ತಾಲೂಕಿನ ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ ತರಕಾರಿ ಬೀಜ ವಿತರಣೆಯಾಗಿ ತರಕಾರಿ ಕೃಷಿ ಈ ಮಳೆಗಾಲ ಕಾಣಲಿದೆ. ಉಳಿದ ತರಕಾರಿಗಳು ಸಹಕಾರಿ ಸಂಘಗಳ ಮೂಲಕ, ಸ್ಥಳೀಯ ಅಂಗಡಿಗಳ ಮೂಲಕ ಜನರಿಗೂ ಸಿಗಲಿದೆ.

ಸುಳ್ಯ ತಾಲೂಕಿನಲ್ಲಿ  ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ  ಈ ಬಾರಿ ತರಕಾರಿ ಬೀಜಗಳ ವಿತರಣೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿದ್ದು ತರಕಾರಿ ಬೀಜಗಳ ಸಂಗ್ರಹ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಸಕ್ತ ಕೃಷಿಕರು ತರಕಾರಿ ಬೀಜವನ್ನು ಬಿತ್ತುವಂತೆ ಹಾಗೂ ತರಕಾರಿ ಬೆಳೆಯನ್ನು  ಬೆಳೆಯುವಂತೆ ಉತ್ತೇಜನ ನೀಡಲಾಗಿದೆ. ಆತ್ಮನಿರ್ಭರ ಭಾರತ ಹೆಜ್ಜೆಯಾಗಿರುವ ಈ ಯೋಜನೆಯಲ್ಲಿ ಆಸಕ್ತ ಕೃಷಿಕರು ತೊಡಗಿಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ಅಲಸಂಡೆ, ಪಡುವಲಕಾಯಿ, ಹಾಗಲಕಾಯಿ, ಬೆಂಡೆಕಾಯಿ, ಸೋರೆಕಾಯಿ, ಬದನೆ, ಚೀನೀಕಾಯಿ ಸೇರಿದಂತೆ ವಿವಿಧ ತರಕಾರಿ ಬೀಜಗಳು ಲಭ್ಯವಾಗಲಿದೆ.  ಗುಣಮಟ್ಟದ ತರಕಾರಿ ಬೀಜಗಳನ್ನೇ ಆಯ್ಕೆ ಮಾಡಲಾಗಿದ್ದು ಜೂ.8 ರ ಬಳಿಕ ವಿವಿಧ ಸಹಕಾರಿ ಸಂಘ ಹಾಗೂ ಗ್ರಾಮ ವಿಕಾಸ ಸಮಿತಿಗಳ ಆಶ್ರಯದಲ್ಲಿ  ಕೃಷಿಕರಿಗೆ ವಿತರಣೆಯಾಗಲಿದೆ. ಈಗಿನ ಅಂದಾಜು ಪ್ರಕಾರ ತಾಲೂಕಿನ ಸುಮಾರು 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ ಮಾಡುವ ಗುರಿ ಹೊಂದಲಾಗಿದೆ.  ಇದಕ್ಕಾಗಿ ಸಹಕಾರಿ ಸಂಘಗಳೂ ಸಹಕಾರ ನೀಡಲಿದೆ.

ಜೂ.8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ  ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.

ತರಕಾರಿ ಬೆಳೆಯು ಕೃಷಿಕರಿಗೆ ಸ್ವಾವಲಂಬನೆಯ ದಾರಿಯನ್ನು  ಹೇಳುವುದಲ್ಲದೆ ಉತ್ತಮ ಆದಾಯವನ್ನೂ ತರಬಲ್ಲುದು. ಆತ್ಮನಿರ್ಭರ ಭಾರತದ ಉದ್ದೇಶಕ್ಕೂ ಪೂರಕವಾಗಲಿದೆ. ಕೃಷಿಕರು ತರಕಾರಿ ಬೆಳೆದು ತಾವು ಉಪಯೋಗಿಸಿ ಹೆಚ್ಚಾಗಿರುವ ತರಕಾರಿಯನ್ನು ಮಾರಾಟ ಮಾಡಲು ಕೂಡಾ ಅವಕಾಶವೂ ಸಿಗಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

4 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago