ಸುಳ್ಯ ತಾಲೂಕಿನಲ್ಲಿ ಗ್ರಾಮ ವಿಕಾಸ ಸಮಿತಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಆಶ್ರಯದಲ್ಲಿ ಈ ಬಾರಿ ತರಕಾರಿ ಬೀಜಗಳ ವಿತರಣೆ ನಡೆಯಲಿದೆ.ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆದಿದ್ದು ತರಕಾರಿ ಬೀಜಗಳ ಸಂಗ್ರಹ ನಡೆದಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಆಸಕ್ತ ಕೃಷಿಕರು ತರಕಾರಿ ಬೀಜವನ್ನು ಬಿತ್ತುವಂತೆ ಹಾಗೂ ತರಕಾರಿ ಬೆಳೆಯನ್ನು ಬೆಳೆಯುವಂತೆ ಉತ್ತೇಜನ ನೀಡಲಾಗಿದೆ. ಆತ್ಮನಿರ್ಭರ ಭಾರತ ಹೆಜ್ಜೆಯಾಗಿರುವ ಈ ಯೋಜನೆಯಲ್ಲಿ ಆಸಕ್ತ ಕೃಷಿಕರು ತೊಡಗಿಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ಅಲಸಂಡೆ, ಪಡುವಲಕಾಯಿ, ಹಾಗಲಕಾಯಿ, ಬೆಂಡೆಕಾಯಿ, ಸೋರೆಕಾಯಿ, ಬದನೆ, ಚೀನೀಕಾಯಿ ಸೇರಿದಂತೆ ವಿವಿಧ ತರಕಾರಿ ಬೀಜಗಳು ಲಭ್ಯವಾಗಲಿದೆ. ಗುಣಮಟ್ಟದ ತರಕಾರಿ ಬೀಜಗಳನ್ನೇ ಆಯ್ಕೆ ಮಾಡಲಾಗಿದ್ದು ಜೂ.8 ರ ಬಳಿಕ ವಿವಿಧ ಸಹಕಾರಿ ಸಂಘ ಹಾಗೂ ಗ್ರಾಮ ವಿಕಾಸ ಸಮಿತಿಗಳ ಆಶ್ರಯದಲ್ಲಿ ಕೃಷಿಕರಿಗೆ ವಿತರಣೆಯಾಗಲಿದೆ. ಈಗಿನ ಅಂದಾಜು ಪ್ರಕಾರ ತಾಲೂಕಿನ ಸುಮಾರು 6000 ಕುಟುಂಬಗಳಿಗೆ ತರಕಾರಿ ಬೀಜ ವಿತರಣೆ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಸಹಕಾರಿ ಸಂಘಗಳೂ ಸಹಕಾರ ನೀಡಲಿದೆ.
ಜೂ.8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ. ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ ಸಹಕಾರಿ ಸಂಘ ಮತ್ತು ಗ್ರಾಮ ವಿಕಾಸ ಸಮಿತಿಯ ವತಿಯಿಂದ ತರಕಾರಿ ಬೀಜ ವಿತರಣೆ ನಡೆಯುವುದು.
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…
ಭಾರತ ಹಿಂದೂ ರಾಷ್ಟ್ರ. ಆದರೆ ಇಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ.…
ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…